Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:11 - ಕನ್ನಡ ಸಮಕಾಲಿಕ ಅನುವಾದ

11 ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:11
12 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.


ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.


ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು