Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:8 - ಕನ್ನಡ ಸಮಕಾಲಿಕ ಅನುವಾದ

8 ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:8
23 ತಿಳಿವುಗಳ ಹೋಲಿಕೆ  

ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.


ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.


ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.


ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,


ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.


“ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”


ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು