Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:5 - ಕನ್ನಡ ಸಮಕಾಲಿಕ ಅನುವಾದ

5 ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:5
17 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


“ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.


ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?


ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯ ಮಾಡಲಿ. ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರಿ!” ಎಂದು ಹೇಳಲಿ.


ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.


ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.


ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು