Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ದೇವರು ಬಾಣವನ್ನು ಎಸೆಯಲು ಫಕ್ಕನೆ ಅವರಿಗೆ ಗಾಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:7
18 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.


ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.


ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.


ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು