Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:2 - ಕನ್ನಡ ಸಮಕಾಲಿಕ ಅನುವಾದ

2 ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:2
23 ತಿಳಿವುಗಳ ಹೋಲಿಕೆ  

ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾರೆ.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.


ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ನಾನು ದಹನಬಲಿಯೊಂದಿಗೆ ನಿಮ್ಮ ಆಲಯಕ್ಕೆ ಬರುವೆನು.


ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.


ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,


ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು