Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 67:4 - ಕನ್ನಡ ಸಮಕಾಲಿಕ ಅನುವಾದ

4 ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 67:4
18 ತಿಳಿವುಗಳ ಹೋಲಿಕೆ  

ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.


“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.


“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಏಕೆಂದರೆ, “ಬಂಜೆಯೇ, ಹೆರದವಳೇ, ಆನಂದಿಸು. ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


“ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು