Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:1 - ಕನ್ನಡ ಸಮಕಾಲಿಕ ಅನುವಾದ

1 ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಎದ್ದು ಹೊರಡುವಾಗ ಆತನ ವೈರಿಗಳು ಚದರಿಹೋಗುವರು; ಆತನ ಹಗೆಗಾರರು ಬೆಂಗೊಟ್ಟು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:1
21 ತಿಳಿವುಗಳ ಹೋಲಿಕೆ  

ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”


ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ.


ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.


ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀವು ಏಳುವಾಗ ರಾಜ್ಯಗಳು ಚದರಿ ಹೋಗುತ್ತವೆ.


“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.


ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.


ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು.


ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.


ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.


ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು