Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:10 - ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು. ದೇವರೇ, ನಿಮ್ಮ ಒಳ್ಳೆಯತನದಿಂದ ಬಡವರಿಗೋಸ್ಕರ ಒದಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಿಸಿಕೊಂಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಸವರಿಸಿ ಕೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:10
18 ತಿಳಿವುಗಳ ಹೋಲಿಕೆ  

ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.


ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.


ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.


ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.


ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.


ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.


ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು