Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:21 - ಕನ್ನಡ ಸಮಕಾಲಿಕ ಅನುವಾದ

21 ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:21
15 ತಿಳಿವುಗಳ ಹೋಲಿಕೆ  

ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.


ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು