Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:29 - ಕನ್ನಡ ಸಮಕಾಲಿಕ ಅನುವಾದ

29 ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜರುಗಳು ತಮ್ಮ ಕಾಣಿಕೆಗಳನ್ನು ತೆಗೆದುಕೊಂಡು ಜೆರುಸಲೇಮಿನ ನಿನ್ನ ಆಲಯಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:29
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.


ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.


ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.


ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು