Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:30 - ಕನ್ನಡ ಸಮಕಾಲಿಕ ಅನುವಾದ

30 ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:30
21 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,


ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.


ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.


ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು