Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:14 - ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಕಳ್ಳುಸುಬಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲ ರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:14
20 ತಿಳಿವುಗಳ ಹೋಲಿಕೆ  

ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.


ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.


ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು.


ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.


ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ.


ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.


ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು