Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:21 - ಕನ್ನಡ ಸಮಕಾಲಿಕ ಅನುವಾದ

21 ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:21
13 ತಿಳಿವುಗಳ ಹೋಲಿಕೆ  

ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.


ಸೈನಿಕರು ಸಹ ಯೇಸುವಿನ ಬಳಿಗೆ ಬಂದು ಅವರನ್ನು ಹಾಸ್ಯಮಾಡಿ ಯೇಸುವಿಗೆ ಹುಳಿರಸವನ್ನು ಕೊಟ್ಟು,


ಆಗ ಅವರು ಯೇಸುವಿಗೆ ರಕ್ತಬೋಳ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ.


ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.


ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.


ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು