Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:8 - ಕನ್ನಡ ಸಮಕಾಲಿಕ ಅನುವಾದ

8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:8
18 ತಿಳಿವುಗಳ ಹೋಲಿಕೆ  

ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.


ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?


ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು