Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:15 - ಕನ್ನಡ ಸಮಕಾಲಿಕ ಅನುವಾದ

15 ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:15
19 ತಿಳಿವುಗಳ ಹೋಲಿಕೆ  

ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.


ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ.


ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.


ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.


ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ನೀವು ಒಣಹುಲ್ಲನ್ನು ಗರ್ಭಧರಿಸಿ, ಪೈರಿನ ಮೋಟನ್ನು ಹೆರುವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗುವುದು.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು