Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:11 - ಕನ್ನಡ ಸಮಕಾಲಿಕ ಅನುವಾದ

11 ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:11
13 ತಿಳಿವುಗಳ ಹೋಲಿಕೆ  

ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.


ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.


“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.


ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು.


ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.


ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು