Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:18 - ಕನ್ನಡ ಸಮಕಾಲಿಕ ಅನುವಾದ

18 ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:18
16 ತಿಳಿವುಗಳ ಹೋಲಿಕೆ  

ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.


ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.


ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.


ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.


ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.


ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು