Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:2 - ಕನ್ನಡ ಸಮಕಾಲಿಕ ಅನುವಾದ

2 ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:2
18 ತಿಳಿವುಗಳ ಹೋಲಿಕೆ  

ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು