Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:9 - ಕನ್ನಡ ಸಮಕಾಲಿಕ ಅನುವಾದ

9 ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ, ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:9
9 ತಿಳಿವುಗಳ ಹೋಲಿಕೆ  

ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.


ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.


ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.


“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,


ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.


ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು