Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:15 - ಕನ್ನಡ ಸಮಕಾಲಿಕ ಅನುವಾದ

15 ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:15
15 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ನಿನ್ನ ಬಿಲ್ಲನ್ನು ಹೊರ ತೆಗೆದಿ, ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ.


ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.


ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು