Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:2 - ಕನ್ನಡ ಸಮಕಾಲಿಕ ಅನುವಾದ

2 “ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:2
12 ತಿಳಿವುಗಳ ಹೋಲಿಕೆ  

ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು