Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:9 - ಕನ್ನಡ ಸಮಕಾಲಿಕ ಅನುವಾದ

9 ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಲೋಕದ ದೀನರನ್ನು ರಕ್ಷಿಸಿ ನ್ಯಾಯವನ್ನು ಸ್ಥಾಪಿಸುವದಕ್ಕೋಸ್ಕರ ಎದ್ದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:9
12 ತಿಳಿವುಗಳ ಹೋಲಿಕೆ  

ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.


ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.


ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು