Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:2 - ಕನ್ನಡ ಸಮಕಾಲಿಕ ಅನುವಾದ

2 ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:2
29 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


“ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?


ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.


ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು