Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:35 - ಕನ್ನಡ ಸಮಕಾಲಿಕ ಅನುವಾದ

35 ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:35
19 ತಿಳಿವುಗಳ ಹೋಲಿಕೆ  

ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.


ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.


ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.


ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.


ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು