Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಯಾಕೋಬವಂಶದಲ್ಲಿ ಕಟ್ಟಳೆಯನ್ನಿಟ್ಟು ಇಸ್ರಾಯೇಲ್ಯರಿಗೆ ನಿಯಮಮಾಡಿ ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನಂದರೆ - ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:5
21 ತಿಳಿವುಗಳ ಹೋಲಿಕೆ  

ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. ನಾವು ತಿಳಿಯದ ಭಾಷೆಯನ್ನು ಕೇಳಿದಾಗ:


ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.


ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.


ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.


ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು