Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:72 - ಕನ್ನಡ ಸಮಕಾಲಿಕ ಅನುವಾದ

72 ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

72 ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ ತನ್ನ ಹಸ್ತಕೌಶಲ್ಯದಿಂದ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72 ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:72
15 ತಿಳಿವುಗಳ ಹೋಲಿಕೆ  

“ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು