Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:13 - ಕನ್ನಡ ಸಮಕಾಲಿಕ ಅನುವಾದ

13 ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:13
15 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.


ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು