Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:15
16 ತಿಳಿವುಗಳ ಹೋಲಿಕೆ  

ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ವಿಶ್ರಮಿಸಿಕೊಳ್ಳುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು