Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:9 - ಕನ್ನಡ ಸಮಕಾಲಿಕ ಅನುವಾದ

9 ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:9
17 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.


ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.


ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.


ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು