Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:12
20 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.


ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು.


“ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,


ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು