Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ನಮಗೆ ಒಳ್ಳೆಯವುಗಳನ್ನು ಹೇರಳವಾಗಿ ಒದಗಿಸುವನು. ಭೂಮಿಯು ಒಳ್ಳೆಯ ಬೆಳೆಗಳನ್ನು ಬೆಳೆಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:12
18 ತಿಳಿವುಗಳ ಹೋಲಿಕೆ  

ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.


ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು