Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:14 - ಕನ್ನಡ ಸಮಕಾಲಿಕ ಅನುವಾದ

14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರೇ, ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕೆ ಕಾದಿದೆ. ಅವರು ನಿನ್ನನ್ನು ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:14
21 ತಿಳಿವುಗಳ ಹೋಲಿಕೆ  

ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.


ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ.


ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.


ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.


ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.


ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.


ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು