Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣಾಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:17
14 ತಿಳಿವುಗಳ ಹೋಲಿಕೆ  

ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು