Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:26 - ಕನ್ನಡ ಸಮಕಾಲಿಕ ಅನುವಾದ

26 ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ನನ್ನೊಡನೆ - ನನ್ನ ತಂದೆಯೂ ದೇವರೂ ಆಶ್ರಯದುರ್ಗವೂ ನೀನೇ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:26
17 ತಿಳಿವುಗಳ ಹೋಲಿಕೆ  

ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


“ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.


ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.


ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು