Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:27 - ಕನ್ನಡ ಸಮಕಾಲಿಕ ಅನುವಾದ

27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:27
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.


ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.


ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.


ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


“ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.


ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು