Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:30 - ಕನ್ನಡ ಸಮಕಾಲಿಕ ಅನುವಾದ

30 “ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು ನನ್ನ ಆಜ್ಞೆಗಳಲ್ಲಿ ನಡೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದುಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:30
15 ತಿಳಿವುಗಳ ಹೋಲಿಕೆ  

ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.


ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”


ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.


ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು