Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:41 - ಕನ್ನಡ ಸಮಕಾಲಿಕ ಅನುವಾದ

41 ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ದಾರಿಗರೆಲ್ಲರೂ ಅವನನ್ನು ಸುಲಿಗೆಮಾಡುತ್ತಾರೆ; ಸುತ್ತಣವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವನ ನೆರೆಹೊರೆಯವರು ಅವನನ್ನು ನೋಡಿ ನಗುವರು. ದಾರಿಯಲ್ಲಿ ಹಾದುಹೋಗುವವರು ಅವನಿಂದ ವಸ್ತುಗಳನ್ನು ಕದ್ದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:41
18 ತಿಳಿವುಗಳ ಹೋಲಿಕೆ  

ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು