Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:20
14 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.


ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು