Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:5 - ಕನ್ನಡ ಸಮಕಾಲಿಕ ಅನುವಾದ

5 ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:5
24 ತಿಳಿವುಗಳ ಹೋಲಿಕೆ  

ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.


ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.


ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.


ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು