Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:12 - ಕನ್ನಡ ಸಮಕಾಲಿಕ ಅನುವಾದ

12 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:12
20 ತಿಳಿವುಗಳ ಹೋಲಿಕೆ  

“ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಶಿಸ್ತಿಗೆ ನಿನ್ನ ಹೃದಯವನ್ನೂ ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.


ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು