Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:13 - ಕನ್ನಡ ಸಮಕಾಲಿಕ ಅನುವಾದ

13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:13
14 ತಿಳಿವುಗಳ ಹೋಲಿಕೆ  

ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.


“ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು