Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:3 - ಕನ್ನಡ ಸಮಕಾಲಿಕ ಅನುವಾದ

3 ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:3
16 ತಿಳಿವುಗಳ ಹೋಲಿಕೆ  

ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.


ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.


ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.


ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?


ನನ್ನ ದೇವರೊಂದಿಗೆ ಪ್ರವಾದಿಯು ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ.


ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.


ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು