Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:10
19 ತಿಳಿವುಗಳ ಹೋಲಿಕೆ  

ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,


ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು