Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:15 - ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:15
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು