Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:6 - ಕನ್ನಡ ಸಮಕಾಲಿಕ ಅನುವಾದ

6 ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:6
37 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.


ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.


ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.


ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.


ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.


ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು