Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:9 - ಕನ್ನಡ ಸಮಕಾಲಿಕ ಅನುವಾದ

9 ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:9
14 ತಿಳಿವುಗಳ ಹೋಲಿಕೆ  

ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.


ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.


ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು