Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:1
26 ತಿಳಿವುಗಳ ಹೋಲಿಕೆ  

ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


“ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ದ್ವೀಪಗಳೆಲ್ಲವೂ ಕಂಡು ಬೆರಗಾದವು. ಭೂಮಿಯ ಕಟ್ಟಕಡೆಯು ನಡುಗಿತು. ಅವರು ಸಮೀಪಕ್ಕೆ ಬಂದರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು