Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ತೆನಿ ಕುರ್ಸಾರ್ ವೊತಲ್ಲ್ಯಾ ರಗ್ತಾ ವೈನಾ ಸಮಾದಾನ್ ಹಾನುನ್ ಸರ್‍ಗಾರ್ ಅನಿ ಜಮ್ನಿ ವರ್‍ತಿ ಹೊತ್ತೆ ಹರ್ ಎಕ್ಬಿ ತೆಚ್ಯಾ ವೈನಾ ರಾಜಿ ಕರುನ್ ಘೆವ್ಚೆ ಮನ್ತಲಿ ದೆವಾಚಿ ಇಚ್ಚಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:20
22 ತಿಳಿವುಗಳ ಹೋಲಿಕೆ  

ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಗಿದ್ಯೋನಿಯ ಮಗ ಅಬೀದಾನನ ಅರ್ಪಣೆಯು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು