Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರಾತಾನಾ, ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾತರ್ ತೆಂಚ್ಯಾ ಪದ್ದತಿಯಾಂಚಿ ಸನಾ, ಆಂವ್ಸೆಚೆ ಕಾರೆವ್, ಸಬ್ಬತಾಚಿ ದಿಸಾ, ಹ್ಯಾ ನಿಯಮಾ ಘೆವ್ನ್ ಕೊನ್ಬಿ ಝಡ್ತಿ ಕರುಚ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:16
42 ತಿಳಿವುಗಳ ಹೋಲಿಕೆ  

ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.


ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.


ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.


ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.


ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು.


ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.


ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.


ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು