Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕ್ರಿಸ್ತಾಕ್ಡೆ ಸಗ್ಳೆ ಶಾನೆಪಾನ್ ಅನಿ ಸಾವ್ಕಾರ್ಕಿ ನಿಪ್ಪುನ್ ಥವಲ್ಲಿ ಹಾಯ್, ತೊಚ್ ನಿಪ್ಪುನ್ ಥವಲ್ಲೆ ಕಾಡುಕ್ ಚಾವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:3
21 ತಿಳಿವುಗಳ ಹೋಲಿಕೆ  

ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ


“ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.


ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ.


ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು